
ನಾಡದೋಣಿ ಮೀನುಗಾರರಿಗೆ ಪ್ರತ್ಯೇಕ ಜಟ್ಟಿ ನಿರ್ಮಿಸಿ ಕೊಡುವಂತೆ ಮಲ್ಪೆ ನಾಡ ದೋಣಿ ಮೀನುಗಾರರ ಸಂಘದವರು ಶಾಸಕ ಶ್ರೀ ಕೆ ರಘುಪತಿ ಭಟ್ ಅವರಲ್ಲಿ ಮನವಿ ಮಾಡಿದ್ದು, ಇಂದು ದಿನಾಂಕ 12-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಡ ದೋಣಿ ಮೀನುಗಾರರಿಗೆ ಪ್ರತ್ಯೇಕ ಜಟ್ಟಿ ನಿರ್ಮಿಸಿ ಕೊಡುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

