
ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕು ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವ 55 ಕುಟುಂಬಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಇಂದು ದಿನಾಂಕ 21-03-2023 ರಂದು ಉಪ್ಪೂರು ಗ್ರಾಮದ ಗೆಳೆಯರ ಬಳಗದ ವಠಾರದಲ್ಲಿ ವಿತರಿಸಿದರು. ಉಪ್ಪೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರು ಈ ಕುಟುಂಬಗಳಿಗೆ ಗೋಮಾಳದ ಸಮಸ್ಯೆಯಿಂದಾಗಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿರುತ್ತದೆ. ವಿಶೇಷ ಪ್ರಕರಣಗಳ ಅಡಿ ಗೋಮಾಳವನ್ನು ವಿರಹಿತಗೊಳಿಸಿ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಜು ಪೂಜಾರಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಗ್ರಾಮ ಲೆಕ್ಕಾಧಿಕಾರಿಗಳಾದ ಚಂದ್ರ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

