×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಇಂದು ಗಣಹೋಮವನ್ನು ನೆರವೇರಿಸಿ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ಶ್ರೀ ವಿಜೇಂದರ್ ಗುಪ್ತ, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ನಮ್ಮ ಪಕ್ಷದ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ ನಾಯಕ್, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀ ಶ್ರೀಶ ನಾಯಕ್, ಜಿಲ್ಲಾ ಕಾರ್ಯದರ್ಶಿ ಶ್ರೀ ಗುರುಪ್ರಸಾದ್ ಶೆಟ್ಟಿ, ಮಂಗಳೂರು ವಿಭಾಗದ ಪ್ರಭಾರೀಗಳಾದ ಶ್ರೀ ಉದಯ್ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್, ಕ್ಷೇತ್ರ ಚುನಾವಣಾ ಉಸ್ತುವಾರಿ ಶ್ರೀಮತಿ ಸುಲೋಚನಾ ಭಟ್, ಹಿರಿಯರಾದ ಕೊಲ್ಲಬೆಟ್ಟು ಶ್ರೀ ರವೀಂದ್ರ ಶೆಟ್ಟಿ, ಶ್ರೀ ಗಂಗಾಧರ್ ಸುವರ್ಣ, ಶ್ರೀಮತಿ ವೀಣಾ ಶೆಟ್ಟಿ, ಶ್ರೀಮತಿ ಶ್ಯಾಮಲ ಕುಂದರ್, ಶ್ರೀಮತಿ ಗೀತಾಂಜಲಿ ಸುವರ್ಣ, ಶ್ರೀಮತಿ ಶಿಲ್ಪಾ ಜಿ ಸುವರ್ಣ, ಶ್ರೀಮತಿ ಶೀಲಾ ಶೆಟ್ಟಿ, ಶ್ರೀಮತಿ ನೀತಾ ಗುರುರಾಜ್, ಶ್ರೀಮತಿ ಶಶಿಪ್ರಭ ಶೆಟ್ಟಿ, ಶ್ರೀಮತಿ ಮಾಲಿನಿ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *