
ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಬಿಜೆಪಿ ಅಭ್ಯರ್ಥಿಯಾಗಿ ಸುರೇಶ್ ಶೆಟ್ಟಿ, ಗುರ್ಮ ಎ.17ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದು . ಶನಿವಾರ ಕಾವು ಕ ಒನ್ ಹೊಟೇಲ್ ಸಭಾಂಗಣದಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.17ರಂದು ಬೆಳಗ್ಗೆ 10 ಗಂಟೆಗೆ ಕಾಪು ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಮಾವೇಶ ನಡೆಯಲಿದ್ದು, 25 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು ಸಮಾವೇಶದ ನಂತರ ಜನಾರ್ದನ ದೇವಸ್ಥಾನದಿಂದ ತಾಲೂಕು ಆಡಳಿತ ಸೌಧದವರೆಗೆ ಪಾದಯಾತ್ರೆ ಮೂಲಕ ಸಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು

