
ಸ್ವರಾಜ್ ಮೈದಾನದಿಂದ ಹೊರಟ ಮೆರವಣಿಗೆಯೂ ಬಂಡೇಮಠ ಬಸ್ ನಿಲ್ದಾಣ ತಲುಪಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳುವ ಮೂಲಕ ಉದಯ ಕುಮಾರ್ ಶೆಟ್ಟಿಗೆ ಸಾಥ್ ನೀಡಿದರು. ಚೆಂಡೆ, ಹುಲಿವೇಷ ಹಾಗೂ ಡಿಜೆ ಸೌಂಡ್ ಮರವಣಿಯಲ್ಲಿ ಕಂಡು ಬಂತು. ಪಕ್ಷದ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಳ ಉದಯಕುಮಾರ್ ಶೆಟ್ಟಿ ಪರ ಘೋಷಣೆಗಳು ದಾರಿಯುದ್ದಕ್ಕೂ ಮೊಳಗಿದವು. ಪಕ್ಷದ ರಾಜ್ಯ ಮತ್ತು ರಾಷ್ಟ್ರಮಟ್ಟದ ಮುಖಂಡರ ಭಾವಚಿತ್ರಗಳು ಜಾಥದಲ್ಲಿ ರಾರಾಜಿಸುತ್ತಿದ್ದವು.ಕಾಲ್ಮಡಿಗೆ ಅನಂತಶಯನ ದೇವಸ್ಥಾನ ತಲುಪುತ್ತಿದ್ದಂತೆ ಹಲವು ಹಿರಿಯರು ನಾಗರಿಕರು ಅಭ್ಯರ್ಥಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರಿಗೆ ಆಶೀರ್ವದಿಸಿದರು. ಗ್ರಾಮೀಣ ಪ್ರದೇಶಗಳಿಂದ ಅತ್ಯಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಅಗಮಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಜಾಥದಲ್ಲಿ ಉದಯ ಕುಮಾರ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ ಆರ್ ರಾಜು, ಕೇರಳ ಸಂಸದ ಪ್ರತಾಪನ್, ಜಿಲ್ಲಾ ಯವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂಎ ಗಫೂರ್,ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ ಉದ್ಯಮಿ ಗಿರೀಶ್ ಶೆಟ್ಟಿ, ಕುಡುಪುಲಾಜಿ, ಮಂಜುನಾಥ ಪೂಜಾರಿ, ಸುರೇಂದ್ರ ಶೆಟ್ಟಿ, ಪವರ್ ಟಿವಿ ಸಂಸ್ಥಾಪಕ ರಾಕೇಶ್ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಶುಭದ ರಾವ್, ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಡಿಸೋಜ, ದೇವಿಪ್ರಸಾದ್ ಶೆಟ್ಟಿ, ಅಣ್ಣಪ್ಪ ನಕ್ರೆ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಾಯಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಉದ್ಯಮಿ ರಹೀಂ ಎಣ್ಣೆಹೊಳೆ, ನೀರ ಕ್ರಷ್ಣ ಶೆಟ್ಟಿ, ಪ್ರೇಮ್ ಕುಮಾರ್ ಹೊಸ್ಮಾ ಉಪಸ್ಥಿತರಿದ್ದರು.


