×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಇಂದು ದಿನಾಂಕ 15-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *