ದ.ಕ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಬ್ರಹ್ಮಾವರ. ಇದರ ಹಳೆ ಸಾಮಾಗ್ರಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುವುದರ ಮೂಲಕ ಅವ್ಯವಹಾರ ನಡೆಸಿ ಕಾರ್ಖಾನೆಯ ಸದಸ್ಯರಿಗೆ ಮತ್ತು ರೈತರಿಗೆ ವಂಚಿಸಿರುವ ಆಡಳಿತ ಮಂಡಳಿಯ ವಿರುದ್ಧ ದಿನಾಂಕ 09/10/2023, ಸೋಮವಾರ ದಂದು ಬೆಳಿಗ್ಗೆ 10.00 ಗಂಟೆಗೆ, ಬ್ರಹ್ಮಾವರ – ಸಕ್ಕರೆ ಕಾರ್ಖಾನೆಯ ಎದುರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಎಲ್ಲಾ ಬ್ಲಾಕ್ ಸಮಿತಿಗಳ ಸಹಭಾಗಿತ್ವದಲ್ಲಿ, “ಬೃಹತ್ ಪ್ರತಿಭಟನಾ ಸಭೆ” ಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ, ಕಾಪು ವಿ.ಸ. ಕ್ಷೇತ್ರದ ಉಭಯ ಬ್ಲಾಕ್ ಗಳ ಎಲ್ಲಾ ಮುಖಂಡರು, ಎಲ್ಲಾ ಮುಂಚೂಣಿ ಹಾಗೂ ಇತರೆ ಸಮಿತಿ / ಘಟಕಗಳ ಅಧ್ಯಕ್ಷರು / ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮತ್ತು ಉಭಯ ಬ್ಲಾಕ್ ಸಮಿತಿಗಳ ಅಧ್ಯಕ್ಷರುಗಳು ಪತ್ರಿಕಾ ಹೇಳಿಕೆಯ ಮೂಲಕ ಕೋರಿರುತ್ತಾರೆ.

