×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

 ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವಿದ್ಯಾಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಕಾಪು ಶಾಸಕ ಸುರೇಶ ಶೆಟ್ಟಿ ಗುರ್ಮೆ, ಮಾಜಿ ಸಚಿವ ಸಿ.ಟಿ ರವಿ , ಬಿಜೆಪಿ ಮುಖಂಡರು ಭಾಗಿಯಾದರು. ಇದಕ್ಕೂ ಮುನ್ನ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ದಿಕ್ಸೂಚಿ ಭಾಷಣ ಮಾಡಿದರು. ದ.ಕ ಅಭ್ಯರ್ಥಿ ಬ್ರಿಜೇಶ್ ಚೌಟ, ರಾಜ್ಯ ಚುನಾವಣಾ ಸಂಚಾಲಕ ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಭಾಗಿಯಾದರು. ಜಾತ್ಯಾತೀತ ಜನತಾದಳ ಮುಖಂಡರಾದ ಶಾಸಕ ಭೋಜೇಗೌಡ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *