×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೋಸ್ಟಲ್ ಸೌಂದರ್ಯ ಸ್ಪರ್ಧೆ – 2024

ಕೋಸ್ಟಲ್ ಸೌಂದರ್ಯ ಸ್ಪರ್ಧೆ – 2024 ನಾಗರಿಕ ಸಮಾಜ ಮಹಿಳೆಯರ ಬಾಹ್ಯ ಸೌಂದರ್ಯಕ್ಕೆ ಕೊಡುವ ಗೌರವ ಅಂತರಿಕ ಸೌಂದರ್ಯಕ್ಕೆ ಕೂಡುವಂತಾಗಬೇಕು:- ಡಾ! ನಿಕೇತನ ಟಿ.ಎಸ್.ಆರ್ ಮೊಡೆಲ್ ಮ್ಯಾನೇಜ್ಮೆಂಟ್ ಗ್ರೂಪ್ ನ ವತಿಯಿಂದ ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್ ಹಾಗೂ ಆಭರಣ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ಟೀನ್ / ಮಿಸ್ / ಮಿಸಸ್ ಕೋಸ್ಟಲ್-2024 ಸೌಂದರ್ಯ ಸ್ಪರ್ಧೆ ಉಡುಪಿಯ ಎಸ್ಸೆನ್ಸಿಯ ಮಣಿಪಾಲ್ ಇನ್ ನ ಗ್ರಾಂಡ್ ಮಿಲಿಯಮ್ ಸಭಾಂಗಣದಲ್ಲಿ ಜರಗಿತು…ಅಂಬಲಪಾಡಿಯ ಜಿ.ಎಸ್ ಶ್ಯಾಮಿಲಿ ಇನ್ಪ್ರಾದ ನಿರ್ದೇಶಕಿ ಶ್ಯಾಮಿಲಿ ಜಿ.ಶಂಕರ್ ಉದ್ಘಾಟಿಸಿ . “ಕರಾವಳಿಯ ಭಾಗದ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿದ್ದು ಟಿ.ಅರ್ .ಎಸ್ ಮಾಡಲ್ ಮೆನೇಜ್ ಮೆಂಟ್ ಕಾರ್ಯ ಶ್ಲಾಘನೀಯ..ಭವಿಷ್ಯದಲ್ಲಿ ಈ ಪ್ರತಿಭೆಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಮಿನುಗುವ ಅವಕಾಶ ಒದಗಿ ಬರಲಿ ಎಂದು ಹಾರೃೆಸಿದರು.” ಅಧ್ಯಕ್ಷತೆ ವಹಿಸಿದ ಉಡುಪಿಯ ,ಡಾ| ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರೊಫೆಸರ್‌ ಡಾ|ನಿಕೇತನ ರವರು ಮಾತನಾಡಿ “ನಾಗರಿಕ ಸಮಾಜ ಮಹಿಳೆಯರ ಬಾಹ್ಯ ಸೌಂದರ್ಯಕ್ಕೆ ಕೊಡುವ ಗಮನವನ್ನು ಅಂತರಿಕ ಸೌಂದರ್ಯಕ್ಕೂ ನೀಡುವಂತಾಗಬೇಕು.ಸ್ತ್ರೀ ಸಮಾನತೆ,ಮಹಿಳಾ ಸಬಲೀಕರಣ ಈ ಕಾಲಘಟ್ಟದಲ್ಲಿ ಅಧುನಿಕ ಜೀವನ ಶೈಲಿಯಿಂದ ಅಂತರಿಕ ಸೌಂದರ್ಯ,ವ್ಯಕ್ತಿತ್ವ ಬೆಳವಣಿಗೆಯನ್ನು ಉದ್ದೀಪನಗೊಳಿಸುವಲ್ಲಿ ಮಹಿಳೆಯರು ವಿಫಲರಾಗುತ್ತಿದ್ದಾರೆ. ಮಹಿಳೆಯರು ತಾವು ಪಡೆದುಕೊಂಡ ವಿದ್ಯೆ, ಆತ್ಮವಿಶ್ವಾಸ ಹಾಗೂ ಛಲದಿಂದ ಎಲ್ಲಾ ಅಡ್ಡಿ ಆತಂಕಗಳನ್ನು ನಿವಾರಿಸಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿ ಕೊಳ್ಳಬೇಕೆಂದರು”
ಈ ಸಂದರ್ಭದಲ್ಲಿ ಮುಂಬೈ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ.ಜೆ.ಸುವರ್ಣ, ಜಯಲಕ್ಷ್ಮೀ ಸಿಲ್ಕ್ಸ್ ನ ನಿರ್ದೇಶಕಿ ಜಯಲಕ್ಷ್ಮೀ ವಿರೇಂದ್ರ ಹೆಗ್ಡೆ, ಚಲನಚಿತ್ರ ನಟರಾದ ಸೂರ್ಯೋದಯ ಪೆರಂಪಳ್ಳಿ, ಸೂರಜ್ ಸನಿಲ್, ನಟಿಯರಾದ ಚಿರಾಶ್ರೀ ಅಂಚನ್, ಸುಕೃತಾ ವಾಗ್ಲೆ , ಶಿಕ್ಷಕಿ ವಂದನಾ ರೈ ಕಾರ್ಕಳ , ಸೌಂದರ್ಯ ಪ್ರದರ್ಶನದ ತರಬೇತುದಾರೆ ನಿಶಿತಾ ಸುವರ್ಣ ಮುಂಬೈ, ರೂಪದರ್ಶಿ ಗಳಾದ ಸ್ಪೂರ್ತಿ.ಡಿ.ಶೆಟ್ಟಿ,ಯಶಸ್ವಿನಿ ದೇವಾಡಿಗ ಉಪಸ್ಥಿತರಿದ್ದರು… ವಿವಿಧ ಕ್ರೇತ್ರಗಳಲ್ಲಿ ಸಾಧನೆಗೃೆದ ಅಸ್ತಿಕ್ ಅವಿನಾಶ್ ಶೆಟ್ಟಿ, ಯಶಸ್ವಿನಿ ದೇವಾಡಿಗ,ಚಿರಶ್ರೀ ಅಂಚನ್, ಸುಕೃತ ವಾಗ್ಲೆ,ನಿಶಿತಾ ಸುವರ್ಣ,ಸೂರಜ್ ಸನಿಲ್ ಹಾಗೂ ಸ್ಪೂರ್ತಿ.ಡಿ.ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಹಾಗೆಯೇ ಸ್ಪರ್ಧಾ ಕಾರ್ಯಕ್ರಮದ ಯಶಸ್ಸಿನ ರೂವಾರಿಗಳಾದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ತಸ್ನೀನ್ ಅರಾ ಇವರನ್ನು ಗೌರವಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಮಾಜಿ ತಾ.ಪಂ.ಸದಸ್ಯ ನವೀನ್ ಚಂದ್ರ ಜೆ.ಶೆಟ್ಟಿ ಪಡುಬಿದ್ರಿ,ಜೇಸಿಐ ಇಂಡಿಯಾ ನಿರ್ದೇಶಕ ವೈ.ಸುಕುಮಾರ್, ಉದ್ಯಮಿ ಸಂತೋಷ್ ಕುಮಾರ್ ಶೆಟ್ಟಿ ಪಡುಬಿದ್ರಿ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೈ ಸುಧೀರ್ ಕುಮಾರ್,ರಾಗ್ ರಂಗ್ ಕಲ್ಚರಲ್ ಕ್ಲಬ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್, ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಅಧ್ಯಕ್ಷ ರಚನ್ ಸಾಲ್ಯಾನ್ , ನಟ ಅಸ್ತಿಕ್ ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ಟೀನ್,ಮಿಸ್, ಮಿಸೆಸ್ ಈ ಮೂರು ವಿಭಾಗದಲ್ಲಿ ಸೌಂದರ್ಯ ಸ್ವರ್ಧೆ ನಡೆದಿದ್ದು ಟೀನ್ ಕೋಸ್ಟಲ್ ವಿಭಾಗದ ವಿಜೇತೆ ಸಾನ್ವಿ, ಪ್ರಥಮ ರನ್ನರ್ ಅಪ್ ದಿಶಾ ರಾಣಿ, ದ್ವಿತೀಯ ರನ್ನರ್ ಅಫ್ ರಕ್ಷಿತಾ ಪಡೆದರು…
ಮಿಸ್ ಕೋಸ್ಟಲ್ ವಿಭಾಗದ ವಿನ್ನರ್ ಅಗಿ ಸುಶ್ಮಿತಾ ಆಚಾರ್ಯ, ಪ್ರಥಮ ರನ್ನರ್ ಅಫ್ ಸಾಯಿ ಶ್ರುತಿ ಪಿಲಿಕಜೆ, ದ್ವಿತೀಯ ರನ್ನರ್ ಅಫ್ ಲಿಂಡಾ ಲೂವಿಸ್ ಮಿಸೆಸ್ ಕೋಸ್ಟಲ್ ವಿಭಾಗದ ವಿನ್ನರ್ ಚೈತ್ರ ಪ್ರಮೋದ್ , ಪ್ರಧಮ ರನ್ನರ್ ಅನೋಲ ಕೆ.ಜೆ, ದ್ವಿತೀಯ ರನ್ನರ್ ಅಫ್ ಪ್ರಿಯಾಂಕಾ ಸುರತ್ಕಲ್ ಇವರುಗಳಿಗೆ ಕಿರೀಟ ತೊಡಿಸಿ ಗೌರವಿಸಲಾಯಿತು. ನಿಶಿತಾ ಸುವರ್ಣ ಮಂಗಳೂರು , ಸೂರಾಜ್ ಸನಿಲ್ ಮಂಗಳೂರು, ಸ್ಪೂರ್ತಿ ಶೆಟ್ಟಿ ಉಡುಪಿ ತೀರ್ಪುಗಾರರಾಗಿ ಸಹಕರಿಸಿದರು. ರಮೇಶ್ ಕಾಂಚನ್ ಸ್ವಾಗತಿಸಿದರು,ತಸ್ನೀನ್ ಅರಾ ಪ್ರಾಸ್ತಾವಿಕವಾಗಿ ಮಾತನಾಡಿದರು..
ಮಂಜು ರೈ ಮೂಳೂರು ,ಪಲ್ಲವಿ ಮಂಗಳೂರು ನಿರೂಪಿಸಿದರು.

Leave a Reply

Your email address will not be published. Required fields are marked *