ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು ದಿನದ ಹಿಂದೆ ರಾತ್ರಿ 11-15 ವೇಳೆಯಲ್ಲಿ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ ತತ್ಕ್ಷಣ ಬೋಟಿನಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ.ಇಂದು ಬೆಳಗ್ಗೆ ಮಲ್ಪೆ ಲೈಟ್ಹೌಸ್ ಬಳಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ […]
ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ […]
ಫೆ 17 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ, ಮಂಗಳೂರಿನ “ಸಹ್ಯಾದ್ರಿ ಗಾರ್ಡನ್”- ಅಡ್ಯಾರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ” ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ” ಕ್ಕೆ, ಭರದಿಂದ ಸಿದ್ಧತೆ ನಡೆದಿದೆ. ಕಾಪು […]