×
Our website is made possible by displaying online advertisements to our visitors. Please consider supporting us by whitelisting our website.
  • 9880645340

ತನಿಖೆಯನ್ನು ತೀವ್ರಗೊಳಿಸಿ ಮೂರ್ತಿಯ ಮೇಲ್ಬಾಗವನ್ನು ಪತ್ತೆ ಹಚ್ಚಿ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕಾಂಗ್ರೆಸ್‌ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಆಗ್ರಹ

ಬೈಲೂರಿನ ಉಮಿಕಲ್ ಗುಡ್ಡದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತತ್‌ಕ್ಷಣವೇ ತನಿಖೆ ಆರಂಭಿಸಿ ವಾರದೊಳಗೆ ನಕಲಿ ಮೂರ್ತಿಗೆ ಬಳಸಿದ ಪರಿಕರಗಳು ಎಲ್ಲಿವೆ ಎಂಬುದನ್ನು ಪತ್ತೆಹಚ್ಚಬೇಕು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಮೂರ್ತಿಯ ಮೇಲ್ಬಾಗವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಬೇಕೆಂದು ಎಂದು ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರದ ತನಿಖೆಯನ್ನು ರಾಜ್ಯ ಸರಕಾರ ಈಗಾಗಲೇ ಸಿಐಡಿಗೆ ಒಪ್ಪಿಸಿದೆ. ಸದ್ಯ ಸಿಐಡಿ ತನಿಖೆಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ನೀಡಲಾಗಿದೆ. ತಡೆಯಾಜ್ಞೆ ತೆರವುಗೊಳಿಸಲು ಕಾನೂನು ಪ್ರಕ್ರಿಯೆ ನಡೆಯುತ್ತಿದೆ, ಹೀಗಾಗಿ ಇನ್ನೊಂದು ಪ್ರಕರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ಚುರುಕುಗೊಳಿಸಬೇಕೆಂದು ಆಗ್ರಹಿಸಿದರು

Leave a Reply

Your email address will not be published. Required fields are marked *