ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಸಾಹಿತ್ಯ ಪರಿಷತ್ತು ಇದರ ಆಶ್ರಯದಲ್ಲಿ ಇಂದು ದಿನಾಂಕ 16-11-2024 ರಂದು ಪಲಿಮಾರು ಜೂನಿಯರ್ ಕಾಲೇಜಿನಲ್ಲಿ ನಡೆದ “ಕಾಪು ತಾಲೂಕು ಮಟ್ಟದ 6ನೇ ಕನ್ನಡ ಸಾಹಿತ್ಯ ಸಮ್ಮೇಳನ” ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನ ಸರ್ವಾಧ್ಯಕ್ಷರಾದ ಪಾಂಗಾಳ ಬಾಬು ಕೊರಗ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಂಟಕಲ್ಲು ಪುಂಡಲೀಕ ಮರಾಠೆ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ ಹಾಗೂ ಗಣ್ಯರು ಉಪಸ್ಥಿತರಿದ್ದರು.

