ಪಡುಬಿದ್ರಿ ಕೋಸ್ಟಲ್ ಕಾರ್ನಿವಾಲ್ 2024 ಜೆಸಿಐ ಪಡುಬಿದ್ರಿಯ 50 ನೇ ವಾರ್ಷಿಕೋತ್ಸವವನ್ನು -ಶಾಸಕ ಸುರೇಶ ಶೆಟ್ಟಿ ಗುರ್ಮೆ ವರ್ಣರಂಜಿತ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಯುವಕರಿಗೆ ಇತರರಿಗೆ ಸೇವೆಯ ಮೂಲಕ ವೈಯಕ್ತಿಕ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಒದಗಿಸುತ್ತದೆ “ಜೆಸಿಐ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಭಾರತದಲ್ಲಿ ಇದು 18 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಗಳಿಗೆ ಅನೇಕ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಹೊಂದಿದೆ” ಎಂದರು ಮಾಜಿ ಶಾಸಕ ಲಾಲಾಜಿ ಮೆಂಡನ್ ಅವರು ಶುಭಹಾರೈಸಿದರು ಸಮಾರಂಭದ ಅಧ್ಯಕ್ಷತೆಯನ್ನು ಜೆಸಿಐ ಪಡುಬಿದ್ರಿಯ ಅಧ್ಯಕ್ಷ ಸಂಜೀತ್ ಎರ್ಮಾಳ್ ವಹಿಸಿದ್ದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಮನೋಹರ್ ಎಸ್ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಪಡುಬಿದ್ರಿ ಗ್ರಾ.ಪಂ ಅಧ್ಯಕ್ಷೆ ಶಶಿಕಲಾ ಪೂಜಾರಿ, ಗ್ರಾ.ಪಂ. ರೇಷ್ಮಾ ಮೆಂಡನ್, ಹೆಜಮಾಡಿ ಗ್ರಾ.ಪಂ. ಉಡುಪಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಹಾಗೂ ಬಿಜೆಪಿ ಉಡುಪಿಯ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಇನ್ನಿತರರು. ಉಪಸ್ಥಿತರಿದ್ದರು


