ಮಹಾಲಕ್ಷ್ಮಿ ಕೋ-ಆಪರೇಟಿವ್ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಡೆದ ಅವ್ಯವಹಾರ ಬಗ್ಗೆ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಅದರ ಅಧ್ಯಕ್ಷರು, ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಇಂದು ಸಂತ್ರಸ್ತರು ಮೌನ ಪ್ರತಿಭಟನೆ ನಡೆಸಿ ನಂತರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿ ನಂತರ ದೂರು ದಾಖಲಿಸಿದರು. ಈ ಸಂದರ್ಭದಲ್ಲಿ ದೀಪಕ್ ಡಿ ಶೆಣೈ, ರಕ್ಷಾ ಎಸ್, ಸಾಹಿನಾ, ಅಫ್ರೀನ್, ರಮೇಶ್ ಕಾಂಚನ್, ನವೀನ್ ಸಾಲ್ಯಾನ್, ನಾಗೇಂದ್ರ ಪುತ್ರನ್, ಗೋಪಾಲ್, ಜಗನ್ನಾಥ್ ಅಮೀನ್ ಹಾಗೂ ಹಲವು ಸಂತ್ರಸ್ತರು ಉಪಸ್ಥಿತರಿದ್ದರು..

