×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿಧಾನಪರಿಷತ್ ನಲ್ಲಿ ಸಿ.ಟಿ ರವಿ ಸಚಿವರಿಗೆ ಹೇಳಿದ ಅವ್ಯಾಚ್ಯ ಶಬ್ದ ಬಿಜೆಪಿಗರ ನೈಜ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ – ರಮೇಶ್ ಕಾಂಚನ್

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಸಿದ್ದು ಖಂಡನೀಯವಾಗಿದ್ದು ಅವರನ್ನು ತಕ್ಷಣವೇ ಅವರನ್ನು ಪರಿಷತ್ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಭಾರತದಲ್ಲಿ ಮಹಿಳೆಯರಿಗೆ ಅಪಾರವಾದ ಗೌರವವಿದ್ದು ಹೆಣ್ಣು ಮಕ್ಕಳಿಗೆ ದೈವೀಸ್ಥಾನ ನೀಡಲಾಗಿದೆ. ಹೀಗಿರುವಾಗ ಸಿ.ಟಿ ರವಿ ಅವರು ಕೆಟ್ಟ ಶಬ್ದ ಬಳಸುವ ಮೂಲಕ ಇಡೀ ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ಎಲ್ಲಾ ಮಹಿಳೆಯರ ಪ್ರತಿನಿಧಿಯಾಗಿ ಸಚಿವೆಯಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರ ಕುರಿತಾಗಿ ಮಾತನಾಡಿರುವುದು ಕೇವಲ ಸಚಿವರಿಗೆ ಮಾತ್ರವಲ್ಲದೆ ಇಡೀ ಹೆಣ್ಣು ಕುಲಕ್ಕೆ ತೋರಿಸಿದ ಅಗೌರವವಾಗಿದೆ. ಒಮ್ಮೆ ತಾನು ಮಾತನಾಡಿ ಈಗ ಹಾಗೆ ಹೇಳಿಲ್ಲ ಎಂದು ಸಿ.ಟಿ ರವಿ ಅವರು ಹೇಳುತ್ತಿರುವುದು ಬಿಜೆಪಿಯವರು ಸುಳ್ಳಿನ ಸರದಾರರು ಎಂಬುದನ್ನು ಮತ್ತೆ ಸಾಬೀತುಗೊಳಿಸುತ್ತಿದ್ದಾರೆ. ಈ ನಡುವೆ ಸಂಸತ್ತಿನ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್ ಆಂಬೇಡ್ಕ ರ್ ಅವರ ಬಗ್ಗೆ ಗೃಹ ಸಚಿವ ಅಮಿತ್ ಶಾ ಕೊಟ್ಟಿರುವ ಹೇಳಿಕೆ ಬಿಜೆಪಿ ಮತ್ತು ಆರ್ ಎಸ್ ಎಸ್ ನ ಮನುವಾದಿ ಚಿಂತನೆಯನ್ನು ಅನಾವರಣಗೊಳಿಸಿದೆ. ಅವರ ಹೇಳಿಕೆಯನ್ನು ದೇಶದ ನಾಗರಿಕರು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಅಂಬೇಡ್ಕರ್ ಈ ದೇಶಕ್ಕೆ ಅಮೂಲ್ಯ ಕೊಡುಗೆಯನ್ನು ನೀಡಿದ್ದು, ಅವರ ಬಗ್ಗೆ ಶಾ ಕೊಟ್ಟಿರುವ ಹೇಳಿಕೆಯಿಂದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ ಎನ್ನುವುದು ಸಾಬೀತಾಗುತ್ತದೆ. ಸಂಸತ್ತಿನಲ್ಲಿ ಉದ್ದೇಶಪೂರ್ವಕ ವಾಗಿಯೇ ಅವರು ಇಂತಹ ಪದಗಳನನ್ನು ಬಳಸಿದ್ದು ಇವರನ್ನು ಸಂಸತ್ತಿನಿಂದ ಅಮಾನತುಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *